Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

ಸಾಲುಮರದ ತಿಮ್ಮಕ್ಕ ಇನ್ನಿಲ್ಲ ಸುಳ್ಳುಸುದ್ದಿ

Authors

Pankaj Menon is a fact-checker based out of Delhi who enjoys ‘digital sleuthing’ and calling out misinformation. He has completed his MA in International Relations from Madras University and has worked with organisations like NDTV, Times Now and Deccan Chronicle online in the past.

Claim
ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ


Fact
ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅವರು ಚಿಕಿತ್ಸೆ ಪಡೆದಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ಮೃತಪಟ್ಟಿದ್ದಾರೆ ಎನ್ನುವ ಸುದ್ದಿಗಳು ಸುಳ್ಳು

ವೃಕ್ಷಮಾತೆ, ಪದ್ಮಶ್ರೀ ಸಾಲು ಮರದ ತಿಮ್ಮಕ್ಕ ಅವರು ಇನ್ನಿಲ್ಲ ಎಂಬ ಕುರಿತ ಪೋಸ್ಟ್ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ.

ಪತ್ರಿಕಾ ವರದಿಗಳ ಪ್ರಕಾರ, ಮಂಗಳವಾರ ಪದ್ಮಶ್ರಿ ಸಾಲು ಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆ ಮತ್ತು ಸುಸ್ತಿನ ಕಾರಣದಿಂದಾಗಿ ಬೆಂಗಳೂರು ಜಯನಗರದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.

ಈ ವಿದ್ಯಮಾನದ ಬಳಿಕ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಗಳು ಹರಿದಾಡಿವೆ. ಫೇಸ್‌ಬುಕ್‌ನಲ್ಲಿ ಕಂಡುಬಂದ ಕ್ಲೇಮಿನಲ್ಲಿ “ಭಾವಪೂರ್ಣ ಶ್ರದ್ದಾಂಜಲಿ, ತನ್ನದೆಲ್ಲವನ್ನೂ ಬಿಟ್ಟು ಗಿಡಮರಗಳನ್ನು ತನ್ನ ಮಕ್ಕಳಂತೆ ಜೋಪಾನ ಮಾಡಿ ಜಗತ್ತಿಗೆ ಮಾದರಿಯಾಗಿದ್ದ ಸಾಲು ಮರದ_ತಿಮ್ಮಕ್ಕ ಇನ್ನಿಲ್ಲ” ಎಂದು ಹೇಳಲಾಗಿದೆ.

Also Read: ಸನ್ಮಾನ ತಿರಸ್ಕರಿಸಿ ಅಹಂಕಾರ ತೋರಿಸಿದ ಸಿಎಂ ಸಿದ್ದರಾಮಯ್ಯ ಎಂಬುದು ನಿಜವೇ?

Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!

ಇದೇ ರೀತಿಯ ಪೋಸ್ಟ್ ಗಳನ್ನು ನಾವು ಇಲ್ಲಿ, ಇಲ್ಲಿ ಕಂಡುಕೊಂಡಿದ್ದೇವೆ.

ಈ ಬಗ್ಗೆ ನ್ಯೂಸ್‌ಚೆಕರ್‌ ಸತ್ಯಶೋಧನೆ ನಡೆಸಿದ್ದು, ಇದು ಸುಳ್ಳು ಎಂದು ಕಂಡುಕೊಂಡಿದೆ.

Fact Check/ Verification

ಸತ್ಯಶೋಧನೆಗಾಗಿ ನಾವು ಗೂಗಲ್‌ನಲ್ಲಿ ಕೀವರ್ಡ್ ಸರ್ಚ್ ನಡೆಸಿದ್ದೇವೆ. ಈ ವೇಳೆ ಹಲವು ವರದಿಗಳು ಲಭ್ಯವಾಗಿವೆ.

ಅಕ್ಟೋಬರ್ 5, 2023ರ ಸುವರ್ಣ ನ್ಯೂಸ್‌ ವರದಿಯ ಪ್ರಕಾರ, “ಕನ್ನಡ ನಾಡಿನ ಹೆಮ್ಮೆಯ ಸಾಧಕಿ ಪದ್ಮ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಆರೋಗ್ಯ ಏರುಪೇರಾಗಿದ್ದು, ನಿರಂತರವಾಗಿ ಕಳೆದೊಂದು ವಾರದಿಂದ ಚಿಕಿತ್ಸೆ ಪಡೆಯುತ್ತಿದ್ದು, ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಆದರೆ, ಕೆಲವರು ಸಾಲು ಮರದ ತಿಮ್ಮಕ್ಕ ಅವರು ಭಾವಪೂರ್ಣ ಶ್ರದ್ಧಾಂಜಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸುಳ್ಳು ಸುದ್ದಿ ಹರಡದಂತೆ ಮನವಿ ಮಾಡಿರುವ ಅವರ ದತ್ತುಪುತ್ರ ಉಮೇಶ್‌ ಆಸ್ಪತ್ರೆಯಲ್ಲಿ ತಿಮ್ಮಕ್ಕ ಚೇತರಿಕೆ ಕಾಣಿಸಿಕೊಂಡಿರುವ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.” ಎಂದಿದೆ.

Also Read: ಮನೆ ಬಳಕೆ ಅಡುಗೆ ಅನಿಲಕ್ಕೆ ರಾಜ್ಯ ಸರ್ಕಾರ ಶೇ.55 ತೆರಿಗೆ ಹಾಕುವುದು ನಿಜವೇ?

Fact Check: ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳು!
ಸುವರ್ಣ ನ್ಯೂಸ್‌ ವರದಿ

ಅಕ್ಟೋಬರ್ 5, 2023ರಂದು ಬಿಟಿವಿ ಯೂಟ್ಯೂಬ್‌ ಚಾನೆಲ್‌, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ವದಂತಿಗೆ ಕಿವಿಗೊಡಬೇಡಿ! ಎಂಬ ಶೀರ್ಷಿಕೆಯಲ್ಲಿ ವೀಡಿಯೋ ಒಂದನ್ನು ಪೋಸ್ಟ್ ಮಾಡಿದೆ. ಇದರ ವಿವರಣೆಯಲ್ಲಿ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ವದಂತಿಗೆ ಕಿವಿಗೊಡಬೇಡಿ ಆಹಾರ ಸೇವನೆ ಮಾಡುತ್ತಿರುವ ವೀಡಿಯೋ ಹಂಚಿಕೊಂಡ ಉಮೇಶ್ ಎಂದಿದೆ. ವೀಡಿಯೋದಲ್ಲಿ ತಿಮ್ಮಕ್ಕ ಅವರು ಆಹಾರ ಸೇವಿಸುತ್ತಿರುವ ವೀಡಿಯೋ ಇದೆ.

ಇನ್ನು ನಾವು ಫೇಸ್ಬುಕ್ ನಲ್ಲಿ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್‌ ಅವರ ಖಾತೆಯನ್ನು ಪರಿಶೀಲಿಸಿದ್ದು, ಅವರು ಸಾಲುಮರದ ತಿಮ್ಮಕ್ಕ ಅವರಿಗೆ ಆಹಾರ ಕೊಡುತ್ತಿರುವ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಅಕ್ಟೋಬರ್ 5, 2023ರಂದು ಅವರು ಈ ವೀಡಿಯೋ ಹಂಚಿಕೊಂಡಿದ್ದಾರೆ.

ಈ ಸಾಕ್ಷ್ಯಗಳನ್ನು ಪರಿಶೀಲಿಸಿದ ಬಳಿಕ ನ್ಯೂಸ್ಚೆಕರ್ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರ ದತ್ತುಪುತ್ರ ಉಮೇಶ್ ವನಸಿರಿ ಅವರನ್ನು ಸಂಪರ್ಕಿಸಿದೆ. ಈ ವೇಳೆ ಅವರು “ಮೂರ್ನಾಲ್ಕು ದಿನಗಳ ಹಿಂದೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಅಪೊಲೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಪರಿಶೀಲನೆ ವೇಳೆ ಅವರಿಗೆ ಹೃದಯದ ತೊಂದರೆ ಕಾಣಿಸಿದ್ದರಿಂದ ಸ್ಟೆಂಟ್ ಹಾಕಲಾಗಿದ್ದು ಈಗ ಚೇತರಿಸಿಕೊಳ್ಳುತ್ತಿದ್ದಾರೆ. ಅವರು ನಿಧನರಾಗಿದ್ದಾರೆ ಎನ್ನುವ ಸುದ್ದಿಗಳು ಸುಳ್ಳು” ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Also Read: ಮಧ್ಯಪ್ರದೇಶದ ಹುಕ್ಕಾ ಬಾರ್ ನಲ್ಲಿ ಮುಸ್ಲಿಂ ಯುವಕರು, ಹಿಂದೂ ಹುಡುಗಿಯರು ಸಿಕ್ಕಿಬಿದ್ದಿದ್ದಾರೆಯೇ, ಸತ್ಯ ಏನು?

Conclusion

ಈ ಸತ್ಯಶೋಧನೆಯ ಪ್ರಕಾರ ವೃಕ್ಷಮಾತೆ, ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರನ್ನು ಇನ್ನಿಲ್ಲ ಎನ್ನುವ ಪೋಸ್ಟ್ ಗಳು ಸುಳ್ಳಾಗಿವೆ. ಅವರು ಚಿಕಿತ್ಸೆಗೆ ಒಳಗಾಗಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಗೊತ್ತಾಗಿದೆ.

Result: False

Our Sources

Report By Suvarna News, Dated: October 5, 2023

YouTube Video By BTV News, Dated: October 5, 2023

Facebook Post By Salumarad Timmakka adopted son Umesh Vanasiri, Dated: October 5, 2023

Conversation with Umesh Vanasiri


ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.

Authors

Pankaj Menon is a fact-checker based out of Delhi who enjoys ‘digital sleuthing’ and calling out misinformation. He has completed his MA in International Relations from Madras University and has worked with organisations like NDTV, Times Now and Deccan Chronicle online in the past.