Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check
Contact Us: checkthis@newschecker.in
Fact Check
ಜನ್ಮಾಷ್ಟಮಿ ಪ್ರಯುಕ್ತ ಉತ್ತರ ಪ್ರದೇಶ ಸರ್ಕಾರದಿಂದ ವಾನರ ಭೋಜನ, ಮೇಘಸ್ಫೋಟ ಎಂಬ ವೀಡಿಯೋಗಳು ಈ ವಾರದ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದಾಗ ಇದು ಎಐ ಮೂಲಕ ರಚಿಸಿದ್ದಾಗಿದೆ ಎಂದು ಗೊತ್ತಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ಪತ್ನಿಯನ್ನು ಜೀವಂತ ಸಮಾಧಿ ಮಾಡುತ್ತಿರುವ ಮುಸ್ಲಿಂ ವ್ಯಕ್ತಿ, ದೌರ್ಭಾಗ್ಯದಿಂದ ನಾನು ಸಂಸದನಾದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ, ಬೆಳಗ್ಗೆ ಚಹಾ ಜೊತೆಗೆ ರಸ್ಕ್ ಬಿಸ್ಕತ್ತು ಸೇವನೆ ಡೇಂಜರ್ ಎಂಬ ಹೇಳಿಕೆಗಳೂ ಪ್ರಮುಖವಾಗಿದ್ದವು. ಇವುಗಳ ಬಗ್ಗೆ ಸತ್ಯಶೋಧನೆ ನಡೆಸಿದಾಗ ಇವುಗಳು ನಿಜವಲ್ಲ ಎಂದು ಗೊತ್ತಾಗಿದೆ. ಈ ಕುರಿತ ವಾರದ ನೋಟ ಇಲ್ಲಿದೆ.

ಕರ್ನಾಟಕದಲ್ಲಿ ಪತ್ನಿಯನ್ನು ಜೀವಂತ ಸಮಾಧಿ ಮಾಡುತ್ತಿರುವ ಮುಸ್ಲಿಂ ವ್ಯಕ್ತಿ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ಬಾಂಗ್ಲಾದೇಶದ ವೀಡಿಯೋ ಆಗಿದೆ ಎಂದು ಕಂಡುಬಂದಿದೆ. ಈ ಕುರಿತ ವರದಿ ಇಲ್ಲಿ ಓದಿ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ವಾನರಗಳಿಗೆ ಭೋಜನ ಏರ್ಪಡಿಸಿದೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿದೆ. ಆದರೆ ಇದರ ಬಗ್ಗೆ ಸತ್ಯಶೋಧನೆ ನಡೆಸಿದಾಗ, ಇದು ಎಐ ಮೂಲಕ ರಚಿಸಿದ ವೀಡಿಯೋ ಎಂದು ಕಂಡುಬಂದಿದೆ. ಈ ಕುರಿತ ವರದಿ ಇಲ್ಲಿ ಓದಿ

ಮೇಘಸ್ಫೋಟ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತದೆ. ಈ ವೀಡಿಯೋವನ್ನೂ ಪರಿಶೀಲನೆ ನಡೆಸಿದಾಗ, ಇದು ಎಐ ನಿಂದ ಮಾಡಿದ್ದಾಗಿದೆ ಎಂದು ಕಂಡುಬಂದಿದೆ. ಈ ಕುರಿತ ವರದಿ ಇಲ್ಲಿ ಓದಿ

ದೌರ್ಭಾಗ್ಯದಿಂದ ನಾನು ಸಂಸದನಾದೆ ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎಂಬಂತೆ ವೀಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಸತ್ಯಶೋಧನೆ ನಡೆಸಿದಾಗ, “ದುರದೃಷ್ಟವಶಾತ್ ಸಂಸತ್ ಸದಸ್ಯ” ಎಂಬ ಮಾತನ್ನು ರಾಹುಲ್ ಗಾಂಧಿ ಅವರು ಮಾಧ್ಯಮಗೋಷ್ಠಿಯಲ್ಲಿ ಬಾಯ್ತಪ್ಪಿನಿಂದ ಹೇಳಿದ್ದು, ಇದು 2023ರ ಘಟನೆಯಾಗಿದೆ ಎಂದು ತಿಳಿದುಬಂದಿದೆ. ಈ ಕುರಿತ ವರದಿ ಇಲ್ಲಿ ಓದಿ

ಬೆಳಗ್ಗೆ ಚಹಾ ಸೇವನೆಯೊಂದಿಗೆ ಬಿಸ್ಕತ್ತು, ರಸ್ಕ್, ಬ್ರೆಡ್ ಇತ್ಯಾದಿ ತಿನ್ನುವುದು ಅಪಾಯಕಾರಿ, ಇದು ಮಧುಮೇಹವನ್ನು ಪ್ರಚೋದಿಸಬಹುದು ಮತ್ತು ಆಮ್ಲೀಯತೆಗೆ ಕಾರಣವಾಗುತ್ತದೆ ಎಂಬಂತೆ ಸುದ್ದಿಯೊಂದರಲ್ಲಿ ಹೇಳಲಾಗಿದೆ. ಈ ಬಗ್ಗೆ ಸತ್ಯಶೋಧನೆ ನಡೆಸಿದಾಗ, ಚಹಾದೊಂದಿಗೆ ತಿನ್ನುವ ತಿಂಡಿಗಳು ವಿಷಕಾರಿಯಲ್ಲ, ಇವುಗಳಿಂದ ಏಕಾಏಕಿ ಹಾನಿಯಾಗುವುದಿಲ್ಲ ಆದರೆ ನಿಜವಾದ ಅಪಾಯವು ಹೆಚ್ಚುವರಿ ಸಕ್ಕರೆ, ಸಂಸ್ಕರಿಸಿದ ಹಿಟ್ಟು ಮತ್ತು ಹುರಿದ ಕೊಬ್ಬಿನಿಂದ ಬರುತ್ತದೆ ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿ ಓದಿ
Ishwarachandra B G
November 21, 2025
Newschecker Team
August 25, 2025
Ishwarachandra B G
August 21, 2025