Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check
Contact Us: checkthis@newschecker.in
Fact Check
ಬಿಹಾರದಲ್ಲಿ ಬಿಜೆಪಿ (ಎನ್ ಡಿಎ) ಚುನಾವಣೆ ಗೆಲುವಿನ ಬಳಿಕ ಅದರ ಬಿಜೆಪಿ ವಿರುದ್ಧ ಜನರು ಪ್ರತಿಭಟನೆ ನಡೆಸಿದ್ದಾರೆ, ಕಚೇರಿಗೆ ಬೆಂಕಿ ಹಚ್ಚಿದ್ದಾರೆ ಎಂಬಂತೆ ಹೇಳಿಕೆಗಳು ಈ ವಾರ ವೈರಲ್ ಆಗಿವೆ. ಇದರೊಂದಿಗೆ ಬಿಹಾರ ಚುನಾವಣೆಯಲ್ಲಿ ಸೋಲುಂಡ ಬಳಿಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ ಎನ್ನುವುದೂ ಪ್ರಸಾರವಾಗಿದೆ. ಈ ಕುರಿತು ನ್ಯೂಸ್ಚೆಕರ್ ಸತ್ಯಶೋಧನೆ ನಡೆಸಿದ್ದು, ಇವುಗಳು ಸುಳ್ಳು ಹೇಳಿಕೆಗಳು ಎಂದು ವರದಿ ಮಾಡಿದೆ. ಇದರೊಂದಿಗೆ ಪಶ್ಚಿಮ ಬಂಗಾಳದಲ್ಲಿ SIR ಜಾರಿಯಿಂದ ಓಡಿ ಹೋದ ಬಾಂಗ್ಲಾದೇಶೀಯರು, ಭಾರತ-ಪಾಕ್ ವೈಮಾನಿಕ ಘರ್ಷಣೆಯ ಕುರಿತು ಪ್ರಧಾನಿ ಮೋದಿಗೆ ಐಶ್ವರ್ಯಾ ರೈ ಪ್ರಶ್ನೆ ಎಂಬ ಹೇಳಿಕೆಗಳೂ ವೈರಲ್ ಆಗಿದ್ದವು. ಇವುಗಳೂ ನಿಜವಲ್ಲ ಎಂಬುದನ್ನು ಸಾಕ್ಷ್ಯಗಳ ಸಮೇತ ನಿರೂಪಿಸಲಾಗಿದೆ. ಈ ಕುರಿತಂತೆ ವಾರದ ನೋಟ ಇಲ್ಲಿದೆ

ಪಾಟ್ನಾದಲ್ಲಿ ಬಿಜೆಪಿ ಕಚೇರಿಗೆ ಬಿಹಾರಿಗಳು ಬೆಂಕಿ ಹಾಕಿದ್ದಾರೆ ಎಂದು ವೀಡಿಯೋ ಒಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಿದಾಗ, ನೇಪಾಳದ ಜೆನ್ ಝಿ ಪ್ರತಿಭಟನೆಯ ಸಂದರ್ಭ ಬಿರ್ಗುಂಜ್ ಮೇಯರ್ ರಾಜೇಶ್ ಮನ್ ಸಿಂಗ್ ಮನೆಗೆ ಬೆಂಕಿ ಹಚ್ಚಿದ ಕುರಿತ ವೀಡಿಯೋವನ್ನು ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ತಿಳಿದುಬಂದಿದೆ. ಈ ವರದಿ ಇಲ್ಲಿ ಓದಿ

ಬಿಹಾರದಲ್ಲಿ ಬಿಜೆಪಿ ಗೆಲುವಿನ ಬಳಿಕ ರಸ್ತೆಗೆ ಇಳಿದು ಜನರು ಪ್ರತಿಭಟನೆ ನಡೆಸಿದ್ದಾರೆ ಎಂದು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ನಿಜವಾಗಿ ಅಸ್ಸಾಂನ ಖ್ಯಾತ ಗಾಯಕ ಜುಬೀನ್ ಗಾರ್ಗ್ ಅವರ ಅಂತಿಮ ಯಾತ್ರೆಯ ವೀಡಿಯೋ ಆಗಿದ್ದು, ತಪ್ಪು ಹೇಳಿಕೆಯೊಂದಿಗೆ ಹಂಚಿಕೊಳ್ಳಲಾಗುತ್ತಿದೆ ಎಂದು ಕಂಡುಬಂದಿದೆ. ಈ ವರದಿ ಇಲ್ಲಿ ಓದಿ

ಬಿಹಾರ ಚುನಾವಣೆಯಲ್ಲಿ ಐಎನ್ ಡಿಐಎ ಮೈತ್ರಿಕೂಟಕ್ಕೆ ಸೋಲಾಗಿದ್ದು, ಆ ಬಳಿಕ ಕಾಂಗ್ರೆಸ್ ನಾಯಕ ದೇಗುಲಗಳಿಗೆ ಭೇಟಿ ನೀಡುತ್ತಿದ್ದಾರೆ ಎಂದು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ ಇದು ತಪ್ಪು ಹೇಳಿಕೆಯಾಗಿದ್ದು 2024ರಲ್ಲಿ ಭಾರತ್ ಜೋಡೋ ಯಾತ್ರೆ ಸಂದರ್ಭ ನಾಸಿಕ್ ತ್ರಯಂಬಕೇಶ್ವರ ದೇಗುಲಕ್ಕೆ ಭೇಟಿ ನೀಡಿದ ವೀಡಿಯೋ ಇದಾಗಿದೆ ಎಂದು ತಿಳಿದುಬಂದಿದೆ. ಈ ವರದಿ ಇಲ್ಲಿ ಓದಿ

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR ) ಪ್ರಾರಂಭವಾಗುತ್ತಿದ್ದಂತೆ, ಅಕ್ರಮ ಬಾಂಗ್ಲಾದೇಶಿ ಜನರು ಓಡಿಹೋಗುತ್ತಿದ್ದಾರೆ ಎಂದು ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಈ ಬಗ್ಗೆ ಸತ್ಯಶೋಧನೆ ನಡೆಸಿದಾಗ, ವೈರಲ್ ವಿಡಿಯೋ ಭಾರತದ್ದಲ್ಲ, ಬದಲಾಗಿ ಬಾಂಗ್ಲಾದೇಶದ ಮೊಂಗ್ಲಾ ಘಾಟ್ನಿಂದ ಬಂದಿದೆ ಎಂದು ಗೊತ್ತಾಗಿದೆ. ಈ ವರದಿ ಇಲ್ಲಿ ಓದಿ

ಆಪರೇಷನ್ ಸಿಂಧೂರ್ ಸಮಯದಲ್ಲಿ ಭಾರತ-ಪಾಕಿಸ್ತಾನ ವೈಮಾನಿಕ ಘರ್ಷಣೆಯಲ್ಲಿ ಭಾರತಕ್ಕಾದ ಹಾನಿ ಕುರಿತು ಪ್ರಧಾನಿ ಮೋದಿ ಅವರನ್ನು ನಟಿ ಐಶ್ವರ್ಯಾ ರೈ ಪ್ರಶ್ನಿಸಿದ್ದಾರೆ ಎಂಬಂತೆ ಸಾಮಾಜಿಕ ಮಾಧ್ಯಮ
ದಲ್ಲಿ ವೀಡಿಯೋ ಹಂಚಿಕೊಳ್ಳಲಾಗುತ್ತಿದೆ. ಸತ್ಯಶೋಧನೆ ವೇಳೆ ಕಂಡು ಬಂದತೆ ಇದು ನಕಲಿ ವೀಡಿಯೋ ಆಗಿದ್ದು ಎಐ ಮೂಲಕ ಮಾಡಲಾಗಿದೆ ಎಂದು ಗೊತ್ತಾಗಿದೆ. ಈ ವರದಿ ಇಲ್ಲಿ ಓದಿ
Ishwarachandra B G
November 21, 2025
Ishwarachandra B G
November 19, 2025
Ishwarachandra B G
November 18, 2025