Saturday, December 20, 2025

Fact Check

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ವಾರದ ನೋಟ

Written By Ishwarachandra B G, Edited By Chayan Kundu
Jun 1, 2024
banner_image

ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ, ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ವೀಡಿಯೋ, ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆ ಎಂಬ ಹೇಳಿಕೆಗಳು ಈ ವಾರ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು. ಇವುಗಳ ಬಗ್ಗೆ ನ್ಯೂಸ್‌ಚೆಕರ್ ಸತ್ಯಶೋಧನೆ ನಡೆಸಿದ್ದು, ಸುಳ್ಳುಗಳು ಎಂದು ನಿರೂಪಿಸಿದೆ.

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ವಾರದ ನೋಟ

ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ ಎಂದ ವೀಡಿಯೋ ನಿಜವೇ?

ತಮಿಳುನಾಡಿನ ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆಯಾಗಿದೆ ಎಂದು ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ವಾಟ್ಸಾಪ್‌ ನಲ್ಲಿ ಈ ವೀಡಿಯೋ ವೈರಲ್‌ ಆಗಿದ್ದು, ಇದರ ಬಗ್ಗೆ ನ್ಯೂಸ್ ಚೆಕರ್ ಸತ್ಯಶೋಧನೆ ನಡೆಸಿದೆ. ಇದು ಹೊಸೂರಿನದ್ದಲ್ಲ, ಚೀನಾದ ಗುವಾಂಗ್‌ಡಾಂಗ್ ಪ್ರಾಂತ್ಯದ ಗುವಾಂಗ್‌ಝೌ ನಗರದ್ದು ಎಂದು ತನಿಖೆಯಲ್ಲಿ ಕಂಡುಬಂದಿದೆ. ಈ ಕುರಿತ ವಿವರಗಳನ್ನು ಇಲ್ಲಿ ಓದಿ

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ವಾರದ ನೋಟ

ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿದೆಯೇ?

ಉಡುಪಿಯಲ್ಲಿ ನಡೆದ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯೊಬ್ಬನ ಕೊಲೆಯಾಗಿದೆ ಎಂಬಂತೆ ಸಾಮಾಜಿಕ ಮಾಧ್ಯಮದಲ್ಲಿ ಸಂದೇಶಗಳನ್ನು ಹಂಚಿಕೊಳ್ಳಲಾಗುತ್ತಿದೆ. ಆದರೆ ತನಿಖೆಯಲ್ಲಿ ತಿಳಿದುಬಂದಂತೆ ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆಯಾಗಿಲ್ಲ. ವ್ಯಕ್ತಿಯೊಬ್ಬ ಗಾಯಗೊಂಡಿದ್ದು ಚೇತರಿಸಿಕೊಂಡಿದ್ದಾನೆ, ಮಾರಕಾಸ್ತ್ರಗಳಿಂದ ಹೊಡೆದಾಡಿಕೊಂಡವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತ ವಿವರಗಳನ್ನು ಇಲ್ಲಿ ಓದಿ

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ವಾರದ ನೋಟ

ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎನ್ನುವ ವೀಡಿಯೋ ಹಿಂದಿನ ಸತ್ಯವೇನು?

ಕೇರಳ ಪೊಲೀಸರು ಅಲ್ಲಿನ ಅಬಕಾರಿ ಮಂತ್ರಿಯನ್ನು ಬಲಾತ್ಕಾರವಾಗಿ ಬಂಧಿಸಿದ್ದಾರೆ ಎಂಬ ರೀತಿಯಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ನ್ಯೂಸ್‌ಚೆಕರ್ ಈ ಬಗ್ಗೆ ತನಿಖೆ ನಡೆಸಿದಾಗ, ಕೇರಳ ಪೊಲೀಸರು ಅಬಕಾರಿ ಮಂತ್ರಿಯನ್ನು ಬಂಧಿಸಿ ಎಳೆದೊಯ್ದಿಲ್ಲ, ಬಂಧನಕ್ಕೊಳಗಾದವರು ಎರ್ನಾಕುಳಂ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಮೊಹಮ್ಮದ್‌ ಶಿಯಾಸ್ ಎಂಬವರಾಗಿದ್ದು, ಆನೆದಾಳಿಯ ವಿರುದ್ಧದ ಪ್ರತಿಭಟನೆ ಪ್ರಕರಣವೊಂದರಲ್ಲಿ ಅವರನ್ನು ಬಂಧಿಸಲಾಗಿತ್ತು ಎಂದು ಗೊತ್ತಾಗಿದೆ. ಈ ಕುರಿತ ವಿವರಗಳನ್ನು ಇಲ್ಲಿ ಓದಿ

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ವಾರದ ನೋಟ

ನಟಿ ರಶ್ಮಿಕಾ ಮಂದಣ್ಣ ಬಿಕಿನಿಯಲ್ಲಿ ಕಾಣಿಸಿಕೊಂಡ ಡೀಪ್ ಫೇಕ್ ವೀಡಿಯೋ ವೈರಲ್

ನಟಿ ರಶ್ಮಿಕಾ ಮಂದಣ್ಣ ಕೆಂಪು ಬಿಕಿನಿಯಲ್ಲಿ ಜಲಪಾತದ ಬಳಿ ಪೋಸ್ ನೀಡಿದ ವೀಡಿಯೋ ಎಂದು ದೃಶ್ಯವೊಂದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗುತ್ತಿದೆ. ತನಿಖೆ ವೇಳೆ ಕಂಡುಬಂದಂತೆ ಇದು ಮೂಲದಲ್ಲಿ ರೂಪದರ್ಶಿ ಡೇನಿಯೆಲಾ ವಿಲ್ಲಾರಿಯಲ್ ಅವರ ವೀಡಿಯೋವಾಗಿದ್ದು ಅದನ್ನು ತಿರುಚಿ ನಟಿ ರಶ್ಮಿಕಾ ಮಂದಣ್ಣರದ್ದು ಎಂಬಂತೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಈ ಕುರಿತ ವಿವರಗಳನ್ನು ಇಲ್ಲಿ ಓದಿ

Weekly wrap: ಹೊಸೂರಿನಲ್ಲಿ ಭಾರೀ ಗಾತ್ರದ ಆಲಿಕಲ್ಲು ಮಳೆ, ಉಡುಪಿ ಗ್ಯಾಂಗ್‌ ವಾರ್ ನಲ್ಲಿ ವ್ಯಕ್ತಿಯ ಕೊಲೆ ವಾರದ ನೋಟ

ಒಣದ್ರಾಕ್ಷಿ ನೀರು ಕುಡಿಯುವುದರಿಂದ ರಕ್ತ ಶುದ್ಧವಾಗುತ್ತದೆಯೇ?

ಒಣದ್ರಾಕ್ಷಿ ನೀರನ್ನು ಕುಡಿದರೆ ರಕ್ತವನ್ನು ಶುದ್ಧಿಗೊಳಿಸುತ್ತದೆ ಎಂಬ ಹೇಳಿಕೆಯೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ. ಆದರೆ ಒಣದ್ರಾಕ್ಷಿ ನೀರನ್ನು ಕುಡಿಯುವುದು ರಕ್ತವನ್ನು ಶುದ್ಧೀಕರಿಸುತ್ತದೆ ಎಂಬ ಹೇಳಿಕೆಯನ್ನು ಬೆಂಬಲಿಸಲು ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಗೊತ್ತಾಗಿದೆ. ಈ ಕುರಿತ ವಿವರಗಳನ್ನು ಇಲ್ಲಿ ಓದಿ


ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.

image
ನೀವು ಯಾವುದೇ ದಾವೆಯ ಸತ್ಯಾಸತ್ಯತೆ ಪರಿಶೀಲಿಸ ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಲು ಅಥವಾ ದೂರು ಸಲ್ಲಿಸಲು ಬಯಸಿದರೆ, ನಮಗೆ ವಾಟ್ಸಾಪ್ ಮಾಡಿರಿ +91-9999499044 ಅಥವಾ ನಮಗೆ ಇಮೇಲ್ ಮಾಡಿರಿ checkthis@newschecker.in​. ನೀವು ನಮ್ಮನೊಂದಿಗೆ ಸಂಪರ್ಕ ಮಾಡಬಹುದು ಮತ್ತು ಫಾರ್ಮ್ ಅನ್ನು ನೀಡಬಹುದು.
Newchecker footer logo
ifcn
fcp
fcn
fl
About Us

Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check

Contact Us: checkthis@newschecker.in

20,641

Fact checks done

FOLLOW US
imageimageimageimageimageimageimage