Newchecker.in is an independent fact-checking initiative of NC Media Networks Pvt. Ltd. We welcome our readers to send us claims to fact check. If you believe a story or statement deserves a fact check, or an error has been made with a published fact check
Contact Us: checkthis@newschecker.in
Fact Check
ಮಹಾ ಕುಂಭಮೇಳದಲ್ಲಿ ಅಖಿಲೇಶ್ ಯಾದವ್ ಶಾಹಿ ಸ್ನಾನ ಮಾಡಿದ್ದಾರೆ, ಮಹಾ ಕುಂಭಮೇಳದಲ್ಲಿ ಸನ್ಯಾಸಿಯಂತೆ ವೇಷ ಧರಿಸಿದ ಉಗ್ರನ ಬಂಧನ ಎಂಬ ಎರಡು ಮಹಾ ಕುಂಭ ಮೇಳದ ಕುರಿತ ಹೇಳಿಕೆಗಳು ಪ್ರಧಾನವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿವೆ. ಉಳಿದಂತೆ ಕೆನಡಾ ಪ್ರಧಾನಿ ಅಭ್ಯರ್ಥಿ ಚಂದ್ರ ಆರ್ಯ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ, ಲಾಸ್ ಏಂಜಲೀಸ್ ಕಾಡ್ಗಿಚ್ಚಿನ ಹಿನ್ನೆಲೆಯಲ್ಲಿ ಜನರು ಮೈದಾನದಲ್ಲೇ ಮಲಗಿದ್ದಾರೆ, ಮಲ್ಲಿಕಾರ್ಜುನ ಖರ್ಗೆಯವರನ್ನು ರಾಹುಲ್ ಗಾಂಧಿ ಕುರ್ಚಿಯಿಂದ ಎಬ್ಬಿಸಿ ಅವಮಾನ ಮಾಡಿದ್ದಾರೆ, ಒತ್ತೆಯಾಳುಗಳಾಗಿದ್ದ ಹಿಂದೂ ಯುವತಿಯರನ್ನು ವ್ಯಕ್ತಿಯೊಬ್ಬ ರಕ್ಷಿಸುತ್ತಿರುವ ವೀಡಿಯೋ, ಬಾಳೆ ಎಲೆಯಲ್ಲಿ ಆಹಾರ ಸೇವಿಸುವುದರಿಂದ ಗಮನಾರ್ಹವಾದ ಆರೋಗ್ಯ ಪ್ರಯೋಜನಗಳಿವೆ ಎಂಬ ಹೇಳಿಕೆಗಳೂ ಇದ್ದವು. ಇವುಗಳ ಕುರಿತ ಸತ್ಯಶೋಧನೆಯನ್ನು ನ್ಯೂಸ್ಚೆಕರ್ ಮಾಡಿದ್ದು, ಇವುಗಳು ತಪ್ಪಾದ ಹೇಳಿಕೆ ಮತ್ತು ನಂಬಲರ್ಹವಲ್ಲ ಎಂದು ಸಾಬೀತು ಮಾಡಿದೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದರ ಬಗ್ಗೆ ಸತ್ಯಶೋಧನೆ ನಡೆಸಿದಾಗ, ವೈರಲ್ ಚಿತ್ರಗಳು ಮಹಾ ಕುಂಭಮೇಳದ್ದಲ್ಲ. ಹರಿದ್ವಾರದ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ದರು ಎಂದು ತಿಳಿದುಬಂದಿದೆ. ಈ ಕುರಿತ ವರದಿ ಇಲ್ಲಿದೆ

ಸನ್ಯಾಸಿ ವೇಷ ಧರಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಫೋಟೋ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದೆ. ಬಳಕೆದಾರರು ಇದು ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದ್ದು ಎಂದು ಹೇಳಿದ್ದಾರೆ. ಸತ್ಯಶೋಧನೆ ನಡೆಸಿದಾಗ, ಮಹಾ ಕುಂಭಮೇಳದಿಂದ ಸನ್ಯಾಸಿಯ ವೇಷ ಧರಿಸಿದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ತೋರಿಸುವ ವೈರಲ್ ಫೋಟೋ ಎಐ ರಚಿಸಲಾಗಿದೆ, ಅಯೂಬ್ ಖಾನ್ ಎನ್ನುವ ವ್ಯಕ್ತಿಯನ್ನು ಕುಂಭಮೇಳದಲ್ಲಿ ಯತಿ ನರಸಿಂಹಾನಂದ ಗಿರಿ ಅವರ ಶಿಬಿರದ ಹೊರಗಿನಿಂದ ಬಂಧಿಸಲಾಗಿದ್ದರೂ ಆತ ಭಯೋತ್ಪಾದಕನಲ್ಲ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ. ಈ ಕುರಿತ ವರದಿ ಇಲ್ಲಿದೆ

ಕೆನಡಾ ಪ್ರಧಾನಿ ಹುದ್ದೆ ರೇಸ್ ನಲ್ಲಿರುವ ತುಮಕೂರು ಮೂಲದ ಚಂದ್ರ ಆರ್ಯ ಅವರು ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಬಳಿಕ ಕೆನಡಾ ಸಂಸತ್ ಸಭೆಯಲ್ಲಿ ಕನ್ನಡದಲ್ಲಿ ಮಾತನಾಡಿದ್ದಾರೆ ಎಂದು ಹೇಳಿಕೆಗಳನ್ನು ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗೆ ತನಿಖೆ ನಡೆಸಿದಾಗ, ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಕೆ ಬಳಿಕ ಚಂದ್ರ ಆರ್ಯ ಅವರು ಕನ್ನಡದಲು ಮಾತನಾಡಿದ್ದಲ್ಲ, 2022ರಲ್ಲಿ ಅವರು ಸಂಸತ್ತಿನಲ್ಲಿ ಕನ್ನಡದಲ್ಲಿ ಮಾತನಾಡಿದ್ದರು. ಈ ಕುರಿತ ವರದಿ ಇಲ್ಲಿದೆ

ಲಾಸ್ ಏಂಜಲೀಸ್ ನಲ್ಲಿ ಕಾಡ್ಗಿಚ್ಚು ತೀವ್ರ ಸ್ವರೂಪ ಪಡೆದ ಬೆನ್ನಲ್ಲೇ ಅಲ್ಲಿ ಜನರು ಮೈದಾನದಲ್ಲಿ ಮಲಗುವಂತಾಗಿದೆ ಎಂಬಂತೆ ಪೋಸ್ಟ್ ಅನ್ನುಹಂಚಿಕೊಳ್ಳಲಾಗುತ್ತಿದೆ. ಸತ್ಯಶೋಧನೆಯ ಪ್ರಕಾರ ಲಾಸ್ ಏಂಜಲೀಸ್ ನ ಪರಿಸ್ಥಿತಿ ಎಂದ ವೀಡಿಯೋ 2023ರಲ್ಲಿ ಲಿಸ್ಬನ್ ನಲ್ಲಿ ನಡೆದ ವರ್ಲ್ಡ್ ಕ್ಯಾಥೋಲಿಕ್ ಯೂತ್ ಡೇ ಸಂದರ್ಭದ್ದಾಗಿದೆ. ಈ ಕುರಿತ ವರದಿ ಇಲ್ಲಿದೆ

ಮಲ್ಲಿಕಾರ್ಜುನ ಖರ್ಗೆಯವರನ್ನು ರಾಹುಲ್ ಗಾಂಧಿ ಕುರ್ಚಿಯಿಂದ ಎಬ್ಬಿಸಿ ಅವಮಾನ ಮಾಡಿದ್ದಾರೆ ಎಂಬಂತೆ ವೀಡಿಯೋ ಒಂದನ್ನು ಹಂಚಿಕೊಳ್ಳಲಾಗುತ್ತಿದೆ. ಕ್ಲಿಪ್ಡ್ ವೀಡಿಯೋ ಬಳಸಿ ಮಲ್ಲಿಕಾರ್ಜುನ ಖರ್ಗೆಯವರನ್ನು ರಾಹುಲ್ ಗಾಂಧಿ ಕುರ್ಚಿಯಿಂದ ಎಬ್ಬಿಸಿ ಅವಮಾನ ಮಾಡಿದ್ದಾರೆ ಎಂದು ಹೇಳಲಾಗಿದೆ. ಖರ್ಗೆಯವರ ಬಗ್ಗೆ ರಾಹುಲ್ ಅಗೌರವಪೂರ್ವಕ ನಡೆದಿದ್ದು ಕಂಡುಬಂದಿಲ್ಲ. ಈ ಹೇಳಿಕೆ ತಪ್ಪಾದ ಸಂದರ್ಭವಾಗಿದೆ. ಈ ಕುರಿತ ವರದಿ ಇಲ್ಲಿದೆ

ಮನೆಯೊಂದರಲ್ಲಿ ಒತ್ತೆಯಾಳುಗಳಾಗಿದ್ದ ಹಿಂದೂ ಯುವತಿಯರನ್ನು ವ್ಯಕ್ತಿಯೊಬ್ಬ ರಕ್ಷಿಸುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆದರೆ ಸತ್ಯಶೋಧನೆಲ್ಲಿ ತಿಳಿದುಬಂದಂತೆ, ಅನ್ಯ ಸಮುದಾಯದವರು ವಂಚಿಸಿ ಒತ್ತೆಯಾಳಾಗಿರಿಸಿದ ಹಿಂದೂ ಹುಡುಗಿಯರನ್ನು ವ್ಯಕ್ತಿಯೊಬ್ಬ ರಕ್ಷಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೋ ಸ್ಕ್ರಿಪ್ಟೆಡ್ ಆಗಿದೆ ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ

ಬಾಳೆ ಎಲೆಯಲ್ಲಿಆಹಾರ ಸೇವಿಸುವುದು ಜೀರ್ಣಕ್ರಿಯೆಗೆ ಒಳ್ಳೆಯದು, ಬಿಳಿ ಕೂದಲನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಕ್ಯಾನ್ಸರ್-ಉಂಟುಮಾಡುವ ರಾಡಿಕಲ್ಗಳನ್ನು ತಡೆಯುತ್ತದೆ ಎಂಬಂತೆ ವೀಡಿಯೋದೊಂದಿಗೆ ಹೇಳಿಕೆಯನ್ನು ಹಂಚಿಕೊಳ್ಳಲಾಗುತ್ತಿದೆ. ಇದರ ಬಗ್ಗ ಸತ್ಯಶೋಧನೆ ನಡೆಸಿದಾಗ, ಬಾಳೆ ಎಲೆಯಲ್ಲಿ ಆಹಾರ ಸೇವನೆ ಸಂಸ್ಕೃತಿಯ ಭಾಗ. ಇದರಿಂದ ಗಮನಾರ್ಹವಾದ ಆರೋಗ್ಯ ಪ್ರಯೋಜನಗಳಿವೆ ಎನ್ನುವುದಕ್ಕೆ ವೈಜ್ಞಾನಿಕ ಸಾಕ್ಷ್ಯಗಳಿಲ್ಲ ಎಂದು ಗೊತ್ತಾಗಿದೆ. ಈ ಕುರಿತ ವರದಿ ಇಲ್ಲಿದೆ
ಯಾವುದೇ ಕ್ಲೈಮ್ ಅನ್ನು ನಾವು ವಾಸ್ತವಿಕವಾಗಿ ಪರಿಶೀಲಿಸಬೇಕೆಂದು ನೀವು ಬಯಸಿದರೆ, ಪ್ರತಿಕ್ರಿಯೆಯನ್ನು ನೀಡಿ ಅಥವಾ ದೂರು ಸಲ್ಲಿಸಬಹುದು, ಜೊತೆಗೆ 9999499044 ನಲ್ಲಿ ನಮಗೆ WhatsApp ಮಾಡಿ ಅಥವಾ → checkthis@newschecker.in ಮೂಲಕ ನಮಗೆ ಇಮೇಲ್ ಮಾಡಿ. ಸಂಪರ್ಕಿಸಿ ಪುಟದ ಮೂಲಕ ನೀವು ನಮ್ಮನ್ನು ಸಂಪರ್ಕಿಸಬಹುದು ಮತ್ತು ಫಾರಂ ಅನ್ನು ಭರ್ತಿ ಮಾಡಬಹುದು.
Ishwarachandra B G
March 1, 2025
Ishwarachandra B G
February 27, 2025
Ishwarachandra B G
February 14, 2025